Saartha

· Storyside IN · Anil Revoor ರವರ ನಿರೂಪಣೆಯಲ್ಲಿ
ಆಡಿಯೋಬುಕ್
13 ಗಂಟೆ 24 ನಿಮಿಷ
ಸಂಕ್ಷಿಪ್ತವಲ್ಲದ
ಅರ್ಹವಾಗಿದೆ
ರೇಟಿಂಗ್‌ಗಳು ಮತ್ತು ವಿಮರ್ಶೆಗಳನ್ನು ಪರಿಶೀಲಿಸಲಾಗಿಲ್ಲ  ಇನ್ನಷ್ಟು ತಿಳಿಯಿರಿ
4 ನಿಮಿಷ ಮಾದರಿ ಬೇಕೇ? ಯಾವಾಗ ಬೇಕಾದರೂ, ಆಫ್‌ಲೈನ್‌ನಲ್ಲಿಯೂ ಆಲಿಸಿ. 
ಸೇರಿಸು

ಈ ಆಡಿಯೊಬುಕ್ ಕುರಿತು

ಪ್ರಖ್ಯಾತ ಲೇಖಕರಾದ ಎಸ್. ಎಲ್. ಭೈರಪ್ಪನವರ 'ಸಾರ್ಥ' ಕಾದಂಬರಿಯು ಭಾರತದಲ್ಲಿ ನಡೆದ ಧರ್ಮಗಳ ತಿಕ್ಕಾಟದ ಕುರಿತ ಕಾದಂಬರಿ. ಸಾರ್ಥ ಒಂದು ಹಳೆಯ ಪದವಾಗಿದ್ದು, ಸರಕು ಸಾಮಾನುಗಳನ್ನು ಹೊತ್ತು ಸಾಗಿಸುವ ಜನಗಳ ಗುಂಪು ಮತ್ತು ಜನಗಳ ಪ್ರಯಾಣವನ್ನು ಸೂಚಿಸುತ್ತದೆ. ಈ ಕಾದಂಬರಿಯು ಕ್ರಿಸ್ತ ಶಕ ೮ನೇ ಶತಮಾನದಲ್ಲಿ ಭಾರತದಲ್ಲಿ ಆದ ರಾಜಕೀಯ, ಧಾರ್ಮಿಕ, ಮತ್ತು ಆಧ್ಯಾತ್ಮಿಕ ಸಂಗತಿಗಳ ಆಧಾರದಮೇಲೆ ರಚಿತವಾಗಿದೆ.ಐತಿಹಾಸಿಕ ವ್ಯಕ್ತಿಗಳಾದ ಆದಿ ಶಂಕರಾಚಾರ್ಯ, ಮಂಡನ ಮಿಶ್ರ, ಉಭಯ ಭಾರತಿ, ಕುಮಾರಿಲ ಭಟ್ಟರನ್ನು, ಮತ್ತು ಹಳೆಯ ನಳಂದ ವಿಶ್ವವಿದ್ಯಾನಿಲಯಗಳನ್ನು ಒಳಗೊಂಡಿದೆ. ವೈದಿಕ ಸಂಪ್ರದಾಯದಲ್ಲಿ ಜನಿಸಿದ ನಾಗಭಟ್ಟನು ಭಾರತದ ವಿವಿಧ ಪ್ರದೇಶಗಳಲ್ಲಿ ಸಂಚರಿಸುವದು ಕಥೆಯ ಒಂದು ಮುಖವಾದರೆ, ಇನ್ನೊಂದು ಮುಖ ಅವನ ಆಧ್ಯಾತ್ಮಿಕ ಅಂತರ್ಯಾತ್ರೆ. ಹೀಗೆ ಎಂಟನೇ ಶತಮಾನದ ಐತಿಹಾಸಿಕ ಕಥಾವಸ್ತುವನ್ನು ಹೊಂದಿರುವ 'ಸಾರ್ಥ' ಒಂದು ವಿಶಿಷ್ಟ ಕೃತಿಯಾಗಿದೆ. ನಾಗಭಟ್ಟನು ಸಾಂಪ್ರದಾಯಿಕ ಹಿನ್ನಲೆಯಿಂದ ಬಂದವನಾದರೂ ಇತರ ಧಾರ್ಮಿಕ ಸಂಪ್ರದಾಯಗಳನ್ನು ತಿಳಿದುಕೊಳ್ಳುವ ಆಸಕ್ತಿಯುಳ್ಳವನು; ವಿಚಿತ್ರವೆನಿಸುವ ವಿಧಿವಿಧಾನಗಳಲ್ಲೂ ತನ್ನನ್ನು ತೊಡಗಿಸಿಕೊಳ್ಳುವ ನೈತಿಕ ಮತ್ತು ಆಧ್ಯಾತ್ಮಿಕವಾಗಿ ಸಾಹಸೀ ಮನೋಭಾವವುಳ್ಳವನು. ಸೆಳೆದು ಓದಿಸಿಕೊಂಡು ಹೋಗುವ ಕಥಾನಿರೂಪಣೆ, ಪುರಾವೆಗಳನ್ನು ಆಧರಿಸಿದ ಚಾರಿತ್ರಿಕ ಸಂಗತಿ ಮತ್ತು ವ್ಯಕ್ತಿಗಳನ್ನು ಆಧರಿಸಿರುವ ಕಥಾವಸ್ತು ಈ ಕಾದಂಬರಿಯ ವೈಶಿಷ್ಟ್ಯ. ದೇಶ-ಕಾಲಗಳ ಮಿತಿಯನ್ನು ಮೀರಿದ 'ಸನಾತನ ಭಾರತ'ವೆಂಬ ಆನುಭಾವಿಕ ಸತ್ಯವನ್ನು ಕಾದಂಬರಿ ಪ್ರಕಾರದ ಸಾಹಿತ್ಯದಲ್ಲಿ ವಿಶಿಷ್ಟರೀತಿಯಲ್ಲಿ ನಿರೂಪಿಸಲಾಗಿದೆ.

ಈ ಆಡಿಯೋಬುಕ್ ಅನ್ನು ರೇಟ್ ಮಾಡಿ

ನಿಮ್ಮ ಅಭಿಪ್ರಾಯವೇನು ಎಂದು ನಮಗೆ ತಿಳಿಸಿ.

ಮಾಹಿತಿಯನ್ನು ಕೇಳಲಾಗುತ್ತಿದೆ

ಸ್ಮಾರ್ಟ್‌ಫೋನ್‌ಗಳು ಮತ್ತು ಟ್ಯಾಬ್ಲೆಟ್‌‌ಗಳು
Android ಮತ್ತು iPad/iPhone ಗೆ Google Play ಪುಸ್ತಕಗಳ ಆ್ಯಪ್ ಇನ್‌ಸ್ಟಾಲ್ ಮಾಡಿ. ಇದು ನಿಮ್ಮ ಖಾತೆಯನ್ನು ಸ್ವಯಂಚಾಲಿತವಾಗಿ ಸಿಂಕ್‌ ಮಾಡುತ್ತದೆ ಮತ್ತು ನೀವು ಎಲ್ಲೇ ಇರಿ ಆನ್‌ಲೈನ್‌ ಅಥವಾ ಆಫ್‌ಲೈನ್‌ನಲ್ಲಿ ಪುಸ್ತಕಗಳನ್ನು ಓದಲು ಅನುಮತಿಸುತ್ತದೆ.
ಲ್ಯಾಪ್‌ಟಾಪ್‌ಗಳು ಮತ್ತು ಕಂಪ್ಯೂಟರ್‌ಗಳು
Google Play ನಲ್ಲಿ ಖರೀದಿಸಿದ ಪುಸ್ತಕಗಳನ್ನು ನಿಮ್ಮ ಕಂಪ್ಯೂಟರ್‌ನ ವೆಬ್ ಬ್ರೌಸರ್ ಅನ್ನು ಬಳಸುವ ಮೂಲಕ ನೀವು ಓದಬಹುದು.